- Wednesday
- July 29th, 2026
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿರುವ ರಾಧಾಕೃಷ್ಣ ಬೊಳ್ಳೂರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ಘೋಷಿಸಿದ್ದಾರೆ.
ವಿಷ್ಣು ಯುವಕ ಮಂಡಲ ವತಿಯಿಂದ ಮೇನಾಲ ಶಾಲೆಯಲ್ಲಿ ಶ್ರಮದಾನ ಮೂಲಕ ಪೈಂಟಿಂಗ್ ಕೆಲಸ ಮಾಡಲಾಯಿತು ವಿಷ್ಣು ಯುವಕ ಮಂಡಲದ ಪದಾಧಿಕಾರಿಗಳು ಸದಸ್ಯರುಗಳು ಭಾಗವಹಿಸಿದರು
ಸುಳ್ಯ ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವೆಂಕಟರಮಣ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರಿಗೆ ಸನ್ಮಾನ ಕಾರ್ಯಕ್ರಮ ಡಿ.18ರಂದು ನಡೆಯಿತು.ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಈ ಸನ್ಮಾನವನ್ನು ಸಂಘದ ಅಧ್ಯಕ್ಷರಾದ ಬಿಟ್ಟಿ ಬಿ.ನೆಡುನಿಲಂ ಮತ್ತು ಉಪಾಧ್ಯಕ್ಷರಾದ ಜೋನ್ ವಿಲಿಯಂ ಲಸ್ರಾದೋರವರು ನೆರವೇರಿಸಿದರು.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಕೆ.ಎಂ.ಜಾರ್ಜ್,...
ಸೌಜನ್ಯ ನ್ಯಾಯಾಕ್ಕಾಗಿ ಹೋರಾಟ ನಡೆಸುತ್ತಿರುವ ಗಿರೀಶ್ ಮಟ್ಟಣ್ಣರವರ ಮೇಲೆ ಧರ್ಮಸ್ಥಳ ಪರಿಸರದಲ್ಲಿ ಹಲ್ಲೆ ಯತ್ನವನ್ನು ಸುಳ್ಯ ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಸುಳ್ಯ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡಿಸಿದ್ದಾರೆ.ಸೌಜನ್ಯ ಅತ್ಯಾಚಾರ ಕೊಲೆಯಾಗಿ 12 ವರ್ಷ ಕಳೆದರೂ ನಮಗೆ ನ್ಯಾಯ ದೊರಕಲಿಲ್ಲ, ಈ ನಿಟ್ಟಿನಲ್ಲಿ ಮಹೇಶ್ ತಿಮರೋಡಿ ನೇತೃತ್ವದಲ್ಲಿ ಹೋರಾಟಗಳು ನಡೆಯುತ್ತಿದೆ. ಮೊನ್ನೆ ದಿನ...
ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಅಕ್ಕಪ್ಪಾಡಿ ಎಂಬುವವರು ವಿಧಿವಶರಾಗಿದ್ದಾರೆ.ಅವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದರು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಅಡ್ಪಂಗಾಯ ಅಯ್ಯಪ್ಪ ಮಂದಿರದಲ್ಲಿ ಧನು ಸಂಕ್ರಮಣದ ಪ್ರಯುಕ್ತ ವಿಶೇಷ ದುರ್ಗಾಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ (ರಿ) ಸನ್ನಿಧಾನ ಅಡ್ಪಂಗಾಯ ಇದರ ವತಿಯಿಂದ ಧನು ಸಂಕ್ರಮಣದ ಪ್ರಯುಕ್ತ ವಿಶೇಷ ದುರ್ಗಾಪೂಜಾ ಕಾರ್ಯಕ್ರಮ ಹಾಗೂ ಅಯ್ಯಪ್ಪ ಸ್ವಾಮಿಗೆ ಸಂಕ್ರಮಣ ಪೂಜೆಯು ಡಿ 17ನೇ ಆದಿತ್ಯವಾರದಂದು ಅಡ್ಪಂಗಾಯ ಅಯ್ಯಪ್ಪ ಮಂದಿರದಲ್ಲಿ ನೆರೆವೇರಿತು....
ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯವರೆಂದು ಪರಿಗಣಿಸಿ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಕೇಂದ್ರ ಸರ್ಕಾರವು ಪತ್ರದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲು ರಾಜ್ಯ ಸರಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಬೌದ್ಧ ಸಂಘಟನೆಯ...
ಕುಮಾರ ಪರ್ವತ ಚಾರಣ ಮಾಡುವ ದಾರಿ ಮಧ್ಯೆ ಗಿರಿಗದ್ದೆ ಎಂಬಲ್ಲಿ ನೆಲೆಸಿದ್ದ ಮಹಾಲಿಂಗ ಭಟ್ಟರು ಸಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು . ಅವರಿಗೆ 67 ವರ್ಷ ವಯಸ್ಸಾಗಿತ್ತು. ಸುಬ್ರಹ್ಮಣ್ಯದಿಂದ 4 ಕಿಮೀ ದೂರದಲ್ಲಿ ದಾರಿ ಮಧ್ಯೆ ಸಿಗುವ ಮನೆಯೇ ಗಿರಿಗದ್ದೆ ಮಹಾಲಿಂಗ ಭಟ್ಟರದು. ಪ್ರವಾಸಿಗರಿಗೆ ಇಲ್ಲಿ ಊಟ ಹಾಗೂ ವಸತಿ ವ್ಯವಸ್ಥೆ...
ಧರ್ಮಸ್ಥಳದ ಸಮೀಪ ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ 10 ದಿನಗಳ ಕಾಲ ಜೇನು ಸಾಕಾಣಿಕೆ ಬಗ್ಗೆ ಉಚಿತ ತರಬೇತಿ ಕಾರ್ಯಕ್ರಮ ಜ. 08 ರಿಂದ ಜ. 17 ರವರೆಗೆ ನಡೆಯಲಿದೆ.ವಯೋಮಿತಿ 18 ರಿಂದ 45 ವರ್ಷಗಳು. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು....
2024ರ ಜನವರಿ 5 ರಿಂದ 9ರ ವರೆಗೆ ಕೇರಳದ ತ್ರಿಶೂರಿನಲ್ಲಿ ನಡೆಯುವ 7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಡಾ.ಸುಂದರ ಕೇನಾಜೆ ಚಿತ್ರಕತೆ ಬರೆದು ನಿರ್ದೇಶನ ಮಾಡಿ ಇತ್ತೀಚಿಗೆ ಬಿಡುಗಡೆಗೊಳಿಸಿದ ತುಳು ಸಾಕ್ಷ್ಯಚಿತ್ರ "ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ" ಆಯ್ಕೆಯಾಗಿದೆ.ತುಳು ವಿಕಿಪೀಡಿಯ ಫೌಂಡೇಶನ್ ತಯಾರಿಸಿದ ಈ ಸಾಕ್ಷ್ಯಚಿತ್ರದ ನಿರ್ಮಾಣವನ್ನು ಸುಳ್ಯದವರೇ ಆದ ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ...
Loading posts...
All posts loaded
No more posts
