- Friday
- July 31st, 2026
ಅಜ್ಜಾವರ ಗ್ರಾಮದ, ಶಿವರಾಜ್ ಎಂ, ಬಿ ಎಂಬವರು ತನಗೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಬೆಳ್ಳಾರೆ ಠಾಣೆಗೆ ದೂರು ಸಲ್ಲಿಸಿರುವ ವಿಚಾರ ತಿಳಿದು ಬಂದಿದೆ. ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ದೂರಿನಂ 17.9.2023 ರಂದು ಸಂಜೆ ಬೆಳ್ಳಾರೆ ಗ್ರಾಮದ ಕೊಳಂಬಳ ಅಕ್ಕಿ ಮಿಲ್ಲ್ ಎದುರು ಡಾಮಾರು ರಸ್ತೆಯಲ್ಲಿ ಹೋಗುತ್ತಿದ್ದಾಗ, ನೆಟ್ಟಾರು ಕಡೆಯಿಂದ ಕಾರೊಂದರಲ್ಲಿ ಬಂದ...
ಸುಬ್ರಹ್ಮಣ್ಯ : ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಬಾಕಿಯಾಗಿದ್ದ ವೇತನ – ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಮನವಿಗೆ ಸ್ಪಂದಿಸಿದ ಸರಕಾರ
ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜು ಮತ್ತು ಎಸ್.ಎಸ್.ಪಿ.ಯು. ಕಾಲೇಜಿನ ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಕಳೆದ ಕೆಲ ತಿಂಗಳುಗಳಿಂದ ವೇತನ ಬಾಕಿಯಾಗಿದ್ದು ಸಂಕಷ್ಟ ಅನುಭವಿಸುವಂತಾಗಿತ್ತು. ಈ ಬಗ್ಗೆ ಹಲವು ಬಾರಿ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ...
ಗುತ್ತಿಗಾರು ವಲಯದ ದೇವಚಳ್ಳ ಕಾರ್ಯ ಕ್ಷೇತ್ರದಲ್ಲಿ ರೈತ ಕ್ಷೇತ್ರ ಪಾಠಶಾಲೆ( ಕೃಷಿ ತರಬೇತಿ) ಕಾರ್ಯಕ್ರಮ ಹರ್ಲಡ್ಕ ಧನಂಜಯರವರ ಮನೆಯಲ್ಲಿ ಸೆ.17 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಭಾನುಪ್ರಕಾಶ ತಳೂರು ವಹಿಸಿದ್ದರು. ಧನಂಜಯ ಹರ್ಲಡ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ದಯಾ ಪ್ರಕಾಶ್ ಚೀಮುಳ್ಳು, ಶ್ಯಾಂ ಪ್ರಸಾದ್ ಗೊರಗೋಡಿ, ಜಗದೀಶ ಪರಮಲೆ ಯವರು ಕೃಷಿ...
ಸುಳ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಉತ್ತಮವಾಗಿ ವ್ಯವಹಾರ ನಡೆಸಿಕೊಂಡು ಬರುತ್ತಿದ್ದು ಸದಸ್ಯರ ದ್ಯೇಯೋದ್ದೇಶವನ್ನು ಪೂರೈಸಿಕೊಂಡು ವಿಶ್ವಾಸ ಪೂರ್ಣ ಸೇವೆ ನೀಡುತ್ತಿದೆ. ಅದೇ ರೀತಿ ಸದಸ್ಯರು ಕೂಡಾ ಸಂಘದ ಅಭ್ಯುದಯಕ್ಕಾಗಿ ಸಹಕಾರ ನೀಡಬೇಕು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಸೆ.16 ರಂದು ಸುಳ್ಯ ಸಿ.ಎ.ಬ್ಯಾಂಕ್ ನ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ...
ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ (ರಿ) ಸುಳ್ಯ ಇದರ ನೇತ್ರತ್ವದಲ್ಲಿ ಸೆ.೨೪ ಭಾನುವಾರ ನಡೆಯುವ ಸಮುದಾಯ ಬಂದುಗಳ ಕ್ರೀಡಾಕೂಟ ಮತ್ತು ಗಾಣಿಗ ಸಮ್ಮಿಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಸಂಧ್ಯಾರಶ್ಮಿ ಕಛೇರಿ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ವಹಿಸಿದ್ದರು . ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಗಾಣಿಗ ಸ್ವಾಮಿಜಿಗಳನ್ನು ಪೂರ್ಣಕುಂಭ ಸ್ವಾಗತಿಸಿ...
ಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ವತಿಯಿಂದ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.19ರಿಂದ ಸೆ.23 ವರೆಗೆ ಕುಕ್ಕೆಸುಬ್ರಹ್ಮಣ್ಯದ ಉತ್ತರಾದಿ ಮಠದಲ್ಲಿ ವಿವಿಧ ವೈಧಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.ಅಲ್ಲದೆ ಸಾಂಸ್ಕೃತಿಕ ಮನೋರಂಜನೆಗಳು ಕುಕ್ಕೆಶ್ರೀ ಕಲಾವೇದಿಕೆಯಲ್ಲಿ ಜರುಗಲಿದೆ.ಈ ಬಾರಿ ಪ್ರಪ್ರಥಮವಾಗಿ ಸೆ.23ರಂದು ನಡೆಯುವ ಗಣಪತಿ ಶೋಭಾಯಾತ್ರೆಗೆ ಸ್ತಬ್ಧಚಿತ್ರ ಸ್ಪರ್ಧೆ ನಡೆಯಲಿದೆ.ಹೆಚ್ಚಿನ ಸಂಖ್ಯೆಯಲ್ಲಿ ಸ್ತಬ್ದಚಿತ್ರವನ್ನು ಆಯೋಜಿಸಿ...
ಸುಳ್ಯ ಜಯನಗರ ನಿವಾಸಿ ಮಿಸ್ರಿಯಾ ಎಂಬ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ಘಟನೆ ವರದಿಯಾಗಿದೆ.ಮಿಸ್ರಿಯಾರವರು ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇರಳ ತ್ರಿಶೂರ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಿಸ್ರಿಯ ಎಂಬ...
ಮಡಪ್ಪಾಡಿ ಯುವಕ ಮಂಡಲ, ಮಂಜುಶ್ರೀ ಯಕ್ಷಗಾನ ಕಲಾ ಸಂಘ, ಶ್ರೀರಾಮ ಭಜನಾ ಮಂಡಳಿ, ಉಜ್ವಲ ಮಹಿಳಾ ಮಂಡಲ ಹಾಗೂ ಸಮಸ್ತ ಭಕ್ತಾಭಿಮಾನಿಗಳ ಆಶ್ರಯದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.19 ರಂದು ಮಡಪ್ಪಾಡಿ ಯಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 7.00ಕ್ಕೆ ಗಣಪತಿ ಹವನ ಹಾಗೂ 8.00 ಗಂಟೆಗೆ ಗಣಪತಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಆರಂಭಗೊಳ್ಳಲಿದೆ....
ರಾಜ್ಯ ಅರಣ್ಯ ಇಲಾಖೆಯಲ್ಲಿ ವಿವಿಧ ವೃತ್ತಗಳಲ್ಲಿ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 13 ವೃತ್ತಗಳ ಹಂತದಲ್ಲಿ ಈ ಹುದ್ದೆಗೆ ನೇಮಕಾತಿ ನಡೆಯಲಿದೆ. ಎಸ್ಎಸ್ಎಲ್ಸಿ ವಿಧ್ಯಾರ್ಹತೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಈ ಹುದ್ದೆಗೆ ಸೆಪ್ಟೆಂಬರ್ 27ರಿಂದ ಅರ್ಜಿ ಸಲ್ಲಿಕೆ...
Loading posts...
All posts loaded
No more posts
