ಅರಣ್ಯ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.

ರಾಜ್ಯ ಅರಣ್ಯ ಇಲಾಖೆಯಲ್ಲಿ ವಿವಿಧ ವೃತ್ತಗಳಲ್ಲಿ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 13 ವೃತ್ತಗಳ ಹಂತದಲ್ಲಿ ಈ ಹುದ್ದೆಗೆ ನೇಮಕಾತಿ ನಡೆಯಲಿದೆ. ಎಸ್ಎಸ್‌ಎಲ್‌ಸಿ ವಿಧ್ಯಾರ್ಹತೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಈ ಹುದ್ದೆಗೆ ಸೆಪ್ಟೆಂಬರ್ 27ರಿಂದ ಅರ್ಜಿ ಸಲ್ಲಿಕೆ...

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ-ಸರಕಾರಿ ಪ್ರೌಢ ಶಾಲೆ ಎಣ್ಮೂರಿಗೆ ದ್ವಿತೀಯ ಸ್ಥಾನ

ಜ್ಞಾನದೀಪ ಪ್ರೌಢಶಾಲೆ ಎಲಿಮಲೆ ಇಲ್ಲಿ ಸೆಪ್ಟೆಂಬರ್ 16ರಂದು ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢ ಶಾಲೆ ಎಣ್ಮೂರು ಶಾಲಾ ಮಕ್ಕಳ ಅಭಿನಯದ ಮೂಢನಂಬಿಕೆಗೆ ಸಂಬಂಧಿಸಿದ ನಾಟಕ ದ್ವಿತೀಯ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈ ನಾಟಕವನ್ನು ರಂಗ ಕಲಾವಿದ ಶ್ರೀ ಪೂರ್ಣೇಶ್ ಆಚಾರ್ಯ ಪುತ್ತೂರು ಮತ್ತು ಶ್ರೀ ರಾಕೇಶ್ ಆಚಾರ್ಯ...
Ad Widget

ಸುಳ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆದಿರುವುದು ಔಚಿತ್ಯಪೂರ್ಣ : ಎಂ ವೆಂಕಪ್ಪ ಗೌಡ

ಸುಳ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಕರೆದಿರುವುದು ಉತ್ತಮ ಬೆಳವಣಿಗೆ. ಕಾಂಗ್ರೆಸ್ ಸರಕಾರ ಇದ್ದು ಸಹ ಬಿಜೆಪಿ ಪಕ್ಷದ ಪದಾಧಿಕಾರಿಗಳಿಗೆ ಅಕ್ರಮ ಸಕ್ರಮ ಸಮಿತಿಯ ನಾಮನಿರ್ದೇಶನ ಗೊಳಿಸಿರುವುದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೋವಾಗಿದೆ. ಹಾಗಾಗಿ ಈ ಕೆಲಸ ಮಾಡಿರುವ ಅಧಿಕಾರಿಗಳ ನಡೆಯ ಕುರಿತು ಮತ್ತು ಮುಂದಿನ ಕೆಲವು ನಾಮನಿರ್ದೇಶನ ಮತ್ತು ದೇವಸ್ಥಾನಗಳ ನಾಮನಿರ್ದೇಶನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯವಾಗದಂತೆ...


ಕಾಂಗ್ರೆಸ್ ಪಕ್ಷ ಉಳಿಸಿ ಆಂದೋಲನಕ್ಕೆ ಕರೆ – ಸೆ.18ರಂದು ಕಾರ್ಯಕರ್ತರ ಸಭೆ

ಸುಳ್ಯದಲ್ಲಿ ಕಳೆದ ಚುನಾವಣೆಯ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಮೂಡಿರುವ ಗೊಂದಲ, ಇತ್ತೀಚಿಗೆ ಕೆಲವೊಂದು ಸಮಿತಿಗಳಿಗೆ ಬಿಜೆಪಿಯವರನ್ನು, ಕಾಂಗ್ರೆಸೇತರ ವ್ಯಕ್ತಿಗಳಿಗೆ ನಾಮನಿರ್ದೇಶನ ಮಾಡಿರುವುದು, ಬಿಜೆಪಿಯವರಿಗೆ ಅನುಕೂಲ ವಾಗುವ ಹಾಗೆ ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿರುವುದು ಹಾಗೂ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿರುವ  ಸುಳ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆತ್ಮವಿಶ್ವಾಸಕ್ಕೆ ಕುಂದು ಬರುತ್ತಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಸೆ.18ರಂದು ಸುಳ್ಯದ ಲಯನ್ಸ್ ಕ್ಲಬ್...

ಬೆಳೆಸಾಲದ ಮಿತಿ ಏರಿಕೆ ಮಾಡಿ ಆಶ್ವಾಸನೆ ಈಡೇರಿಸಿದ ಕಾಂಗ್ರೆಸ್ ಸರ್ಕಾರ ರೈತಪರ ಎಂದು ಸಾಬೀತು – ಪಿ.ಸಿ.ಜಯರಾಮ್, ಪಿ.ಎಸ್.ಗಂಗಾಧರ ಸ್ಪಷ್ಟನೆ

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ನೂರು ದಿನಗಳಲ್ಲಿ ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಯನ್ನು ಈಡೇರಿಸುವ ಬದ್ಧತೆಯನ್ನ ತೋರಿಸಿ ರೈತಪರವಾದ ಸರ್ಕಾರ ಎಂಬುವುದನ್ನು ಸಾಬೀತುಪಡಿಸಿದೆ. 0% ಗೆ ರೂ. 3 ಲಕ್ಷದವರೆಗೆ ಕೊಡುತ್ತಿದ್ದ ಬೆಳೆ ಸಾಲದ ಮಿತಿಯನ್ನು ರೂ. 5 ಲಕ್ಷಕ್ಕೆ ಏರಿಸಿದೆ. ಅದರ ಜೊತೆಗೆ 3% ಬಡ್ಡಿದರದಲ್ಲಿ ನೀಡುತ್ತಿದ್ದ ದೀಘ್ರಾವಧಿ ಸಾಲದ ಮಿತಿಯನ್ನು ರೂ. 10 ಲಕ್ಷದಿಂದ...

ನಡುಗಲ್ಲು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆ.15ರಂದು ಆಚರಿಸಲಾಯಿತು. ಇದರ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳು ಓದಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಮೊಸರು ಕುಡಿಕೆ ಉತ್ಸವ ವೈಭವದ ಶೋಭಾಯಾತ್ರೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮೊಸರು ಕುಡಿಕೆ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ 10ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಶೋಭಾಯಾತ್ರೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡಿತು. ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ತಾ.ಪಂ.ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ತೆಂಗಿನಕಾಯಿ...

ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ವೈಭವದ ಅಟ್ಟಿ ಮಡಕೆ ಒಡೆಯುವ ಸ್ಪರ್ಧೆ, ಧಾರ್ಮಿಕ ಸಭೆ.

ಜಗತ್ತಿಗೆ ಬೆಳಕನ್ನು ನೀಡಿದ ದೇಶ ನಮ್ಮ ಭಾರತ. ಭಾರತ ದೇವಲೋಕಕ್ಕೆ ಸಮಾನವಾದ ಪುಣ್ಯ ಭೂಮಿ. ದೇವತೆಗಳು ಮತ್ತೆ ಹುಟ್ಟಿ ಬರಲು ಬಯಸುವ ಭೂಮಿ ಇದು. ಆಯಾ ಕಾಲದಲ್ಲಿ ಹೇಗೆ ಬದುಕಬೇಕು ಎಂದು ಭಗವಂತನು ಮನುಷ್ಯನಾಗಿ ಹುಟ್ಟಿ ಬಂದು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಆ ರೀತಿ ಬದುಕುವುದು ನಮ್ಮ ಧರ್ಮ. ಭಗವಂತನು ನೀಡಿದ ಈ ಸಂದೇಶ ನಮ್ಮ ಜೀವನಕ್ಕೆ...

ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್ : ಸಾಮಾನ್ಯ ಜ್ವರ ಎಂದು ಕಡೆಗಣಿಸಿದ್ದಲ್ಲಿ ಜೀವಕ್ಕೇ ಕುತ್ತು

ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. ೧೯೯೯ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ...

ಗುತ್ತಿಗಾರು : ಬಾಲಕರ ತ್ರೋಬಾಲ್ ತಂಡ ರನ್ನರ್

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ) ಗಾಂಧಿನಗರ  ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಸೆ. 16ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ತ್ರೋಬಾಲ್  ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತ್ರೋಬಾಲ್ ತಂಡವು  ನೆಹರು ಮೆಮೋರಿಯಲ್ ಪಿ.ಯು ಕಾಲೇಜುನೊಂದಿಗೆ ಸೆಣಸಾಡಿ...
Loading posts...

All posts loaded

No more posts

error: Content is protected !!