ಈ ಬಾರಿ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ – ಸೆ.5 ರಂದು ನಡೆಯುವ ಕಾರ್ಯಕ್ರಮದ ವಿವರ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ.

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಈ ಬಾರಿ ಸುಳ್ಯದಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ.ಹೇಳಿದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಸೆ. 5 ರಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ...

ಇಂದು(ಸೆ.02)ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯ ಉಪವಿಭಾಗ, ವ್ಯಾಪ್ತಿಯ 33/11 ಕೆ.ವಿ, ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಪೀಡರುಗಳಲ್ಲಿ ಸೆ.02 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ,ಡಿಪೋ, ಜಬಳೆ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00...
Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಸ್ರೋ ಸಂಸ್ಥೆಯ ಅಡಿಷನಲ್ ಸೆಕ್ರೆಟರಿ ಸಂಧ್ಯಾ ವಿ. ಶರ್ಮ ಭೇಟಿ

ಇಸ್ರೋ ಸಂಸ್ಥೆಯ ಸೂರ್ಯಗ್ರಹದ ಅಧ್ಯಾಯದ ಅಂಗವಾಗಿ ಉಡಾವಣೆಗೊಳ್ಳಲಿರುವ ಆದಿತ್ಯ ಎಲ್.1 ಉಪಗ್ರಹವು ಯಾವುದೇ ತೊಂದರೆಗಳಿಲ್ಲದೆ ಯಶಸ್ವಿಯಾಗಲೆಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಲ್ಲಿ ಶುಕ್ರವಾರ ಸಂಧ್ಯಾ ವಿ‌. ಶರ್ಮರವರು ಪ್ರಾರ್ಥನೆ ಸಲ್ಲಿಸಿದರು. ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ದೇವಸ್ಥಾನದ ವತಿಯಿಂದ ಇಸ್ರೋ ಸಂಸ್ಥೆಗೆ ಅಭಿನಂದನ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್...

ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಶಾಂತ್ ಮುರುಳ್ಯ

ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ದ.ಕ ಜಿಲ್ಲಾಧ್ಯಕ್ಷರಾಗಿ ಪ್ರಶಾಂತ್ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ 15 ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಾಂತ್ ಮುರುಳ್ಯರವರು ಆಯ್ಕೆಯಾಗಿದ್ದಾರೆ. ಇವರು ಪುಣ್ಚತ್ತಾರು ಬೀರ್ನೆಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಎಂ.ಐ ಲೈಫ್ ಸ್ಟೈಲ್ ಕಂಪೆನಿಯ ಕೃಷಿಗೆ...

ಉಮ್ರಾ ಯಾತ್ರೆ ನಿರ್ವಹಿಸುತ್ತಿರುವ ಕೊಯನಾಡು ಖತೀಬ್ ಉಸ್ತಾದರಿಗೆ ಬೀಳ್ಕೊಡುಗೆ ಸಮಾರಂಭ

ಸುನ್ನಿ ಮುಸ್ಲಿಂ ಜುಮಾ ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಅಸೋಶಿಯೋಸನ್ ಕೊಯನಾಡು ಇದರ ವತಿಯಿಂದ ಸೆ.1 ರಂದು ಜುಮಾ ಬಳಿಕ ಖತೀಬಾರಾದ ಅಬ್ದುಲ್ ಹಮೀದ್ ಅಮ್ಜದಿ ಉಸ್ತಾದಾರಿಗೆ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ರಜಾಕ್ ರವರು ಶಾಲು ಹೊದಿಸಿ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ದೇವರಕೊಲ್ಲಿ ಇಮಾಂ ಜಲೀಲ್ ಸಖಾಫಿ, ಸದರ್ ಉಸ್ತಾದ್ ಹಂಜ ಸಅದಿ, ಕಟ್ಟಡ ಸಮಿತಿ...

ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಆಗ್ರಹಿಸಿ  ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ

ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ತನಿಖೆಗೆ ಒತ್ತಾಯಿಸಿ ಆ.31 ಸುಬ್ರಹ್ಮಣ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿಮಾತನಾಡಿ ಕುಕ್ಕೆ ಸುಬ್ರಹ್ಮಣ್ಯ ನಾಗನ ಕ್ಷೇತ್ರದಲ್ಲಿ  ನಾವೆಲ್ಲಾ ಇದ್ದು ಪ್ರಾರ್ಥನೆ ಮಾಡಿದ್ದೇವೆ.  ಈ ಭಾರಿ ನ್ಯಾಯ ಸಿಗಲಿದೆ. ಆ ದಿನ ದೂರ ಇಲ್ಲ. ಎಂದರು. ಸೌಜನ್ಯಳಿಂದಾಗಿ ಲೋಕದಲ್ಲಿ ಧರ್ಮ ಸ್ಥಾಪನೆಯಾಗಬೇಕಾದ ಕಾಲ ಬಂದಿದೆ.  ಸಮಾಜದಲ್ಲಿ...

ಮರ್ದಾಳ : ಲಯನ್ಸ್ ಕ್ಲಬ್ ವತಿಯಿಂದ ವಿಶೇಷ ಚೇತನ ಮಕ್ಕಳ ಶಾಲೆಯ ಅನ್ನದಾನಕ್ಕೆ ನಿಧಿ ಸಮರ್ಪಣೆ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಆ.29 ರಂದು ಮರ್ದಾಳ ಬೆಥನಿ ಜೀವನ ಜ್ಯೋತಿ ಸ್ಪೆಷಲ್ ಸ್ಕೂಲ್ ನ ವಿಶೇಷ ಚೇತನ ಮಕ್ಕಳ ಶಾಲೆಯ ಅನ್ನದಾನಕ್ಕೆ ನಿಧಿ ಸಮರ್ಪಣೆ ಮಾಡಲಾಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲ| ಪ್ರೋ ರಂಗಯ್ಯ ಶೆಟ್ಟಿಗಾರ್ ಪ್ರಾಸ್ತಾವಿಕ ಭಾಷಣ...

ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆಹೈಕೋರ್ಟ್‌ ತಡೆಯಾಜ್ಞೆ

ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದಾಗಿ ತಿಳಿದು ಬಂದಿದೆ. ಘಟನೆ ವಿವರ: ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಇದ್ದ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದಲ್ಲಿ ಸುಳ್ಯ ಠಾಣಾ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದರು. ವಿಷಯ ಸುದ್ದಿಯಾಗುತ್ತಲೇ ಅರುಣ್ ಕುಮಾರ್ ಪುತ್ತಿಲ...

ಸುಳ್ಯ : ನೂತನ ಆಡಳಿತದೊಂದಿಗೆ  ಹೋಟೆಲ್ ಬೆನಕಾ ಶುಭಾರಂಭ

ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿ ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಆಡಳಿತದೊಂದಿಗೆ ಬೆನಕಾ  ಹೋಟೆಲ್ ಪುನರಾರಂಭಗೊಂಡಿದೆ. ಇಲ್ಲಿ ಮನೆ ಶೈಲಿ ಊಟ ಹಾಗೂ ಉಪಹಾರ ಲಭ್ಯವಿದ್ದು ಅಪ್ಪದಿಟ್ಟು, ನೀರುದೊಸೆ, ರೊಟ್ಟಿ, ಕಲ್ತಪ್ಪ, ಚಾ,ಕಾಪಿ, ಊಟ ದೊರೆಯುತ್ತದೆ. ಶಾಲಾ ಮಕ್ಕಳಿಗೆ ವಿಶೇಷ ರಿಯಾಯಿತಿ ಇದೆ ಎಂದು ಮಾಲಕರಾದ ನಮಿತಾ ಪದ್ಮನಾಭ ಹರ್ಲಡ್ಕ ತಿಳಿಸಿದ್ದಾರೆ.

ಬಡವರ ಸೇವೆಯೇ ಲಯನ್ಸ್ ಕ್ಲಬ್ ನ ಉದ್ದೇಶ – ಪ್ರೊ. ರಂಗಯ್ಯ ಶೆಟ್ಟಿಗಾರ್

ಎಲ್ಲಿ ಅಗತ್ಯತೆ ಇದೆಯೋ ಅಲ್ಲಿ ನಾವಿರಬೇಕು. ಸೇವೆ ಮಾಡುವುದರಿಂದ ನಮಗೆ ತೃಪ್ತಿ ದೊರೆಯುತ್ತದೆ. ಮಂದಹಾಸ ನಗು ತರುವುದರೊಂದಿಗೆ ಬಡವರ ಸೇವೆ ಮಾಡುವುದೇ ಲಯನ್ಸ್ ಕ್ಲಬ್ ನ ಉದ್ದೇಶವಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷ ಪ್ರೊ .ರಂಗಯ್ಯ ಶೆಟ್ಟಿಗಾರ್ ಹೇಳಿದರು. ಅವರು ಆ.30ರಂದು ಮರ್ದಾಳ ಬೆಥನಿ ವಿಶೇಷ ಮಕ್ಕಳ ಶಾಲೆಗೆ ಸುಬ್ರಹ್ಮಣ್ಯ...
Loading posts...

All posts loaded

No more posts

error: Content is protected !!