- Saturday
- August 1st, 2026
ಸುಳ್ಯ ತಾಲೂಕು ಕಛೇರಿ ಮುಂಬಾಗದಲ್ಲಿ ಕಾರ್ಯಾಚರಿಸುತ್ತಿರುವ ಜೆರಾಕ್ಸ್ ಅಂಗಡಿಗೆ ಕಂಪ್ಯೂಟರ್ ಜ್ಞಾನವಿರುವ ನುರಿತ ಮಹಿಳ ಅಭ್ಯರ್ಥಿ ಬೇಕಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಲು ಮಾಲಕರು ಕೋರಿದ್ದಾರೆ. 9945404383.
ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಸೆ. 01ರಂದು ವರ್ಗಾವಣೆಗೊಂಡ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಜಯಕುಮಾರಿ ಬಿ ಡಿ ಇವರಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಆನಂದ ಬಾಣೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ವೀಣಾ ಎಂ ಟಿ, ಎಸ್ ಡಿ ಎಂ ಸಿ ಸದಸ್ಯರಾದ ಸುರೇಶ್...
ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....
ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 104ನೇ ಮಹಾಸಭೆಯ ಆಹ್ವಾನ ಪತ್ರಿಕೆಯನ್ನು ಸಂಘದ ಎಲ್ಲಾ ಸದಸ್ಯರಿಗೆ ತಲುಪಿಸುವ ಸಲುವಾಗಿ ಕ್ಯೂ.ಆರ್. ಕೋಡ್ ಮೂಲಕ ಆ.31ರಂದು ಸಂಘದ ಪ್ರಧಾನ ಕಛೇರಿಯಲ್ಲಿ ಬಿಡುಗಡೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಮಹಾಸಭೆಯ ಕ್ಯೂ.ಆರ್. ಕೋಡ್ ಅನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರು...
✍️ ಭಾಸ್ಕರ ಜೋಗಿಬೆಟ್ಟು ದೈವರಾಧನೆ ಎಂಬುವುದು ತುಳುನಾಡಿನ ಪೂಜ್ಯನೀಯ ಆರಾಧನ ಪದ್ಧತಿ. ಇಲ್ಲಿ ದೈವಗಳೆ ಪ್ರಮುಖ ಆರಾಧನಾ ಶಕ್ತಿಗಳು . ದೈವಗಳು ಸಾಮಾಜಿಕ ನ್ಯಾಯ ಕೊಡುವ ಮಾಯಾ ಶಕ್ತಿಗಳು. ದೈವರಾಧನೆಯಲ್ಲಿ ಹಿರಿಯರು ಮಾಡಿಕೊಂಡು ಬಂದ ಹಲವಾರು ಕಟ್ಟುಪಾಡುಗಳಿವೆ. ನಮ್ಮ ದೈವರಾಧನೆಯಲ್ಲಿ ಆಣೆ ಪ್ರಮಾಣಕ್ಕೆ ಭಾರಿ ಪ್ರಾಮುಖ್ಯತೆ ಇದೆ. ಆಣೆ ಮಾಡುವುದು ಮಕ್ಕಳಾಟಿಕೆಯಲ್ಲ…!! ಇದರ ಪ್ರಭಾವ ಅತ್ಯಂತ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆಯಾಗಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆ.31ರಂದು ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪದ್ಮನಾಭ ಅರಂಬೂರು,ಪ್ರಧಾನ ಕಾರ್ಯದರ್ಶಿಯಾಗಿ ತೇಜೇಶ್ವರ ಕುಂದಲ್ಪಾಡಿ, ಜೊತೆ ಕಾರ್ಯದರ್ಶಿಯಾಗಿ ಜಯದೀಪ್ ಕುದ್ಕುಳಿ, ಕೋಶಾಧಿಕಾರಿಯಾಗಿ ಪ್ರಜ್ಞಾ ಎಸ್.ನಾರಾಯಣ್ ಆಯ್ಕೆಯಾದರು. ನಿರ್ದೇಶಕರಾಗಿ ಜೆ.ಕೆ.ರೈ, ಕೃಷ್ಣ...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರ ಮೇಲೆ ಹರಿದ ಪರಿಣಾಮ ಓರ್ವ ಮೃತ ಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮೂಡಬಿದ್ರೆಗೆ ಮೂರ್ತಿ ಎಂಬುವವರು ತನ್ನ ಊರಿನಿಂದ ಮುಂಜಾನೆ 3 ಗಂಟೆ ಸುಮಾರಿಗೆ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದು ತಾವು ಚಲಾಯಿಸುತ್ತಿದ್ದ ಕಾರು ಅಡ್ಕಾರಿನಲ್ಲಿ...
ತೊಡಿಕಾನದ ಅಡ್ಯಡ್ಕ ಎಂಬಲ್ಲಿ ಅನ್ಯ ಕೋಮಿನ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ೧೮ ದಿನಗಳ ಹಿಂದೆ ಕೇಸು ದಾಖಲಾಗಿದ್ದ ಬಜರಂಗದಳ ಮುಖಂಡರಿಗೆ ನಿರೀಕ್ಷಣಾ ಜಾಮೀನು ಮಂಜೂರು ಗೊಂಡಿರುವುದಾಗಿ ತಿಳಿದು ಬಂದಿದೆ. ಹಲ್ಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿ ಲತೀಶ್ ಗುಂಡ್ಯ ಮತ್ತು ವರ್ಷಿತ್ ಚೊಕ್ಕಾಡಿ ಎಂಬವರ ಮೇಲೆ ಪ್ರಕರಣ ದಾಖಲಾಗಿತ್ತು. ಹಲ್ಲೆ ಪ್ರಕರಣದ ಇಬ್ಬರು ಆರೋಪಿಗಳು...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಹೊರ ತರಲಾದ ” ಬೆಳ್ಳಿ ಬರಹ ” ಸ್ಮರಣ ಸಂಚಿಕೆಯ ಲೋಕಾರ್ಪಣೆ ದಿನಾಂಕ 31-08-2023 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಉಜ್ವಲ್ ಯು.ಜೆ. ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಿ ಮಾತನಾಡುತ್ತಾ ಒಗ್ಗಟ್ಟು...
ಮಂಡೆಕೋಲಿನ ಡೆಂಜಿಗುರಿ ಎಂಬಲ್ಲಿ ರಾತ್ರಿ ಸುಮಾರು 10 ಗಂಟೆ ವೇಳೆಗೆ ಕಾಡುಕೋಣ ರಸ್ತೆ ದಾಟುತ್ತಿದ್ದ ಸಂದರ್ಭ ಅದೇ ರಸ್ತೆಯಾಲ್ಲಿ ಓಮ್ನಿ ಕಾರಿಗೆ ಕಾಡುಕೋಣ ತಾಗಿ, ಓಮ್ನಿ ಪಲ್ಟಿಯಾದ ಘಟನೆ ವರದಿಯಾಗಿದೆ.ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಜಮಾಯಿಸಿದರು ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.ಸ್ಥಳೀಯರ ಆಕ್ರೋಶ : ಮಂಡೆಕೋಲು ಗ್ರಾಮದ ಮುಖ್ಯ ರಸ್ತೆಯ ಬದಿಯಲ್ಲಿ...
Loading posts...
All posts loaded
No more posts
