- Saturday
- August 1st, 2026
ಭಾರತದ ಚಂದ್ರಯಾನ-3 ಮಿಷನ್ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವ ಮೂಲಕ ವಿಶ್ವದಲ್ಲಿ ಭಾರತದ ಗೌರವ ಹೆಚ್ಚಾಗಬೇಕು ಮತ್ತು ನಮ್ಮ ದೇಶದ ಹೆಮ್ಮೆಯ ವಿಜ್ಞಾನಿಗಳ ಪರಿಶ್ರಮ ಸಾರ್ಥಕವಾಗಬೇಕು ಎಂಬುದು ಎಲ್ಲಾ ದೇಶಪ್ರೇಮಿಗಳ ಆಶಯವಾಗಿದ್ದು ಇಡೀ ಜಗತ್ತು ಈ ಸಮಯಕ್ಕಾಗಿ ಕಾತುರದಿಂದ ಕಾಯುತ್ತಿದೆ. ಹಾಗೆಯೇ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲೆಂದು ದೇಶದಾದ್ಯಂತ ಎಲ್ಲರೂ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನಾಳೆ ಬೆಳಿಗ್ಗೆಯಿಂದ...
ಭಾರತ ದೇಶದ ಯುವ ಸೈನಿಕರ ತಂಡವಾದ ಅಗ್ನಿವೀರ್ ತರಬೇತಿ ಮುಗಿಸಿ ತಾಯ್ನಾಡಿಗೆ ಬಂದಿಳಿದ ಅಗ್ನಿವೀರ್ ಕಿಶೋರ್ ಶೇಷನಡ್ಕ ಅವರನ್ನು ಕನಕಮಜಲಿನಲ್ಲಿ ಮತ್ತು ಜಾಲ್ಸೂರು ಗ್ರಾಮದಲ್ಲಿ ಅಗ್ನಿವೀರ್ ಯೋಧನನ್ನು ಗ್ರಾಮಸ್ಥರು ಸ್ವಾಗತಿಸಿ ಬರಮಾಡಿಕೊಂಡರು. ಕನಕಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ಅಗ್ನಿವೀರ್ ಕಿಶೋರ್ ಅವರಿಗೆ ಬರುತ್ತಿದ್ದಂತೆ ರಸ್ತೆಯಲ್ಲಿ ರಾಷ್ಟ್ರಧ್ವಜ ನೀಡಿ ಸ್ವಾಗತಿಸಿದರು.ಜಾಲ್ಸೂರು ಗ್ರಾಮದಲ್ಲಿ...
ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ಪ್ರಮುಖರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಧ್ವಜವನ್ನು ಹಾರಿಸಿದರು. ನಂತರ ಎಲ್ಲರಂ ಗ್ರಾಮ ದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಮೂಲಕ ಸುಳ್ಯ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ದಿ. ಡಾ ಕುರುಂಜಿ ವೆಂಕಟರಮಣ ಗೌಡರ ಧರ್ಮಪತ್ನಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ ಪ್ರಯುಕ್ತ ನುಡಿನಮನ ಕಾರ್ಯಕ್ರಮ ಆಗಸ್ಟ್ 22 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ...
.ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತವೇಶ್ವರ ದೇವಸ್ಥಾನದಲ್ಲಿ ಇಂದು ನಾಗತಂಬಿಲ ಕಾರ್ಯಕ್ರಮ ಜರುಗಿತು. ಊರಿನ ಭಕ್ತರು ಸಿಯಾಳ ಅಬಿಷೇಕ , ಹಾಲಿನ ಅಭಿಷೇಕ ದೇವಾಲಯದ ಅರ್ಚಕರ ನೇತೃತ್ವದಲ್ಲಿ ನಡೆಯಿತು ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮೇನಾಲ ಹಾಗೂ ಸರ್ವ ಸದಸ್ಯರು ಊರಿನ ಭಕ್ತರು ಮತ್ತಿರರು ಉಪಸ್ಥಿತಿತರಿದ್ದರು.
ಅಮರ ಸುಳ್ಯದ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ ಪತ್ನಿ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 11 ನೇ ಪುಣ್ಯ ತಿಥಿಯ ಅಂಗವಾಗಿ ನುಡಿನಮನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಅಕಾಡೆಮಿಕ್ ಡೀನ್ ಚಂದ್ರಶೇಖರ ಎಂ.ಎನ್. ನುಡಿನಮನ ಸಲ್ಲಿಸಿದರು. ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಾಗರ ಪಂಚಮಿ ಅಂಗವಾಗಿ ಐನೆಕಿದು ಕೆದಿಲ ಕುಟುಂಬದ ತರವಾಡ ಮನೆಯಲ್ಲಿ ನಾಗನ ಕಲ್ಲಿಗೆ ಪೂಜೆ ಹಾಗೂ ಹಾಲು ಎರೆಯುವ ಕಾರ್ಯಕ್ರಮ ನಡೆಯಿತು. ಕುಟುಂಬದ ಸದಸ್ಯರು ಭಾಗವಹಿಸಿ ಶ್ರೀ ದೇವರ ಆಶೀರ್ವಾದ ಪಡೆದರು
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಆ.21 ರಂದು ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಯಿತು.ಪವನ್.ಎಂ.ಡಿ ಪ್ರಾರ್ಥಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್...
ಗುತ್ತಿಗಾರು ಸಮೀಪದ ಹಾಲೆಮಜಲು ಎಂಬಲ್ಲಿ ಬೆಳಿಗ್ಗೆ 7:30ರ ಸುಮಾರಿಗೆ ವೃದ್ಧ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದು, ಇದನ್ನು ಗಮನಿಸಿದ ವಿನ್ಯಾಸ್ ಕೊಚ್ಚಿ ಎಂಬುವವರು ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಅಮರಸೇನಾ ಅಂಬುಲೆನ್ಸ್ ಗೆ ತಿಳಿಸಿದ್ದು, ತಕ್ಷಣವೇ ಸ್ಥಳೀಯರ ನೆರವಿನೊಂದಿಗೆ ಗಾಯಾಳು ವ್ಯಕ್ತಿಗೆ ಡಾ| ಕಾಮತ್ ಅವರಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಸುಳ್ಯದ...
ತಮಿಳುನಾಡು ಮೂಲದ ದಂಪತಿ ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಮನೆಯಲ್ಲಿ ದಂಪತಿಗಳು...
Loading posts...
All posts loaded
No more posts
