ದೊಡ್ಡೆರಿ ಬಿರುಕು ಬಿಟ್ಟ ಶಾಲಾ ಕಟ್ಟಡ _ ಶಾಸಕಿ , ಅಧಿಕಾರಿಗಳು ಭೇಟಿ _ ಪರಿಶೀಲನೆ, ದುರಸ್ತಿ ಭರವಸೆ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿ ಸರಕಾರಿ ಶಾಲೆಯು ಶಿಥೀಲ ವ್ಯವಸ್ಥೆಯಲ್ಲಿದ್ದು ಈ ಹಿಂದಿನಿಂದಲೂ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು ಈ ಹಿನ್ನಲೆಯಲ್ಲಿ ಇಂದು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಹಾಗೂ ಇಲಾಖಾ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಸ್ಪೀಕರ್ ಗಮನಕ್ಕೆ ತಂದು ತಕ್ಷಣವೇ ಟೆಂಡರ್ ಪ್ರಕ್ರಿಯೆ ನಡೆಸಲು...

ಸುಬ್ರಹ್ಮಣ್ಯ : ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ

ಶ್ರೀ ವಾಣಿ ವನಿತಾ ಸಮಾಜ(ರಿ) ಸುಬ್ರಮಣ್ಯ, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ) ಸುಳ್ಯ, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ (ರಿ) ಸುಬ್ರಮಣ್ಯ, ಅಂಬಿಕಾ ಗೊಂಚಲು ಸಮಿತಿ ಸುಬ್ರಮಣ್ಯ (ಸ್ತ್ರೀಶಕ್ತಿ), ಅಂಗನವಾಡಿ ಕೇಂದ್ರ ಸುಬ್ರಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮವನ್ನು ಸುಬ್ರಮಣ್ಯ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಪ್ರೆಸ್...
Ad Widget


ಕಲ್ಚರ್ಪೆಯಿಂದ ತ್ಯಾಜ್ಯ ತೆರವುಗೊಳಿಸದಿದ್ದರೇ ನಗರ ಪಂಚಾಯತ್ ಮುಂಭಾಗ ತಂದು ಹಾಕಿ ಪ್ರತಿಭಟನೆಯ ಎಚ್ಚರಿಕೆ –  ಘನತ್ಯಾಜ್ಯ ಘಟಕದ ಬಳಿ ಅಧಿಕಾರಿಗಳಿಗೆ ವಾಸ್ತವ್ಯಕ್ಕೆ ಆಹ್ವಾನ ನೀಡಿದ ಹೋರಾಟ ಸಮಿತಿ 

ಸುಳ್ಯ ನಗರದ ತ್ಯಾಜ್ಯವನ್ನು ಕಲ್ಚರ್ಪೆಯ ತ್ಯಾಜ್ಯ ನಿರ್ವಹಣಾ ಘಟಕದ ಹೊರಗೆ ಜನವಸತಿ ಪ್ತದೇಶದ ಸಮೀಪದ ಅರಣ್ಯದಲ್ಲಿ ಹಾಕಲಾಗಿದ್ದು ಈ ತ್ಯಾಜ್ಯವನ್ನು ಎರಡು ದಿನಗಲ್ಲಿ ತೆರವು ಮಾಡದಿದ್ದರೇ ಕಸವನ್ನು ನಾವೇ ತಂದು ನಗರ ಪಂಚಾಯತ್‌ನ ಮುಂಭಾಗದಲ್ಲಿ ಹಾಕಿ ಪ್ರತಿಭಟನೆ ನಡೆಸುವುತ್ತೇವೆ ಎಂದು ಕಲ್ಚರ್ಪೆ ಪರಿಸರ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯ ಅಶೋಕ್...

ಹೊಂಬೆಳಕು ಬಳಗ ವತಿಯಿಂದ ಸ್ವಚ್ಛತಾ ಹಾಗೂ ಹಣ್ಣಿನ ಗಿಡಗಳ ನಾಟಿ

ಹೊಂಬೆಳಕು ಬಳಗ ನಾಲ್ಕೂರು ಇದರ ವತಿಯಿಂದ ಸ್ವಚ್ಛತಾ ಕಾರ್ಯ ಹಾಗೂ ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳ ನೆಡುವ ಕಾರ್ಯಕ್ರಮ ಆ.13 ರಂದು ನಡುಗಲ್ಲಿನಲ್ಲಿ ನಡೆಯಿತು. ನಾಲ್ಕೂರು ಗ್ರಾಮ ಆಡಳಿತಾಧಿಕಾರಿ ಕಛೇರಿ ಆವರಣ ಸ್ವಚ್ಛತೆ ಹಾಗೂ ನಡುಗಲ್ಲು ಶಾಲೆಯಲ್ಲಿ ಹಣ್ಣಿನ ಗಿಡ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ,ಶಾಲಾ ವಿದ್ಯಾರ್ಥಿ...

ನಿಡುಬೆ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

ನಿಡುಬೆ ಸ.ಕಿ.ಪ್ರಾ.ಶಾಲೆಯಲ್ಲಿ 76 ನೇ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಚಂದ್ರಕಲಾ ಇವರು ಧ್ವಜಾರೋಹಣವನ್ನು ನೆರವೇರಿಸಿದರು.  ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರ ಮೋಹನ್, ಉಪಾಧ್ಯಕ್ಷರಾದ ಶ್ರೀಮತಿ ಸುಂದರಿ, ಶಾಲಾಭಿವದ್ಧಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಕಲಾ, ಪೋಷಕರು, ಮಕ್ಕಳು, ಶಾಲಾಭಿಮಾನಿಗಳಾದ ಸ್ವಾತಿಕ್ ಕುದುಂಗು, ಶ್ರೀಮತಿ ಮಿಥುನ ಅಶ್ವತ್ಥ್ ಜಬಳೆ,...

ಅರಂತೋಡು : ನೆಹರು ಸ್ಮಾರಕ ಪ.ಪೂ. ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ನಡೆಯಿತು. ಕಾಲೇಜಿನ ಸಂಚಾಲಕರಾದ ಕೆ ಆರ್ ಗಂಗಾಧರ್ ಧ್ವಜಾರೋಹಣಗೈದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಂತೋಡು ಗ್ರಾಮ ಪಂಚಾಯಿತಿಯ ಸದಸ್ಯರು ಮತ್ತು ನಿಯೋಜಿತ ಅಧ್ಯಕ್ಷರಾದ ಕೇಶವ ಅಡ್ತಲೆ, ನಿವೃತ್ತ ಸೈನಿಕ ಉತ್ತಪ್ಪ ಮುಂಡೋಡಿ ಮತ್ತು ಸುಳ್ಯ ಪಶು ವೈದ್ಯಕೀಯ ಇಲಾಖೆಯ...

ಸುಳ್ಯ : ಗಾನ ನಮನ ಮತ್ತು ಗೌರವಾರ್ಪಣೆ ಕಾರ್ಯಕ್ರಮ

ಸಾಹಿತ್ಯ ಸಂಗೀತ ಕಲಾ ಕೇಂದ್ರ ಸುಳ್ಯ, ಅರಂತೋಡು ಶಾಖೆ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗಾನ ನಮನ ಮತ್ತು ಗೌರವಾರ್ಪಣೆ ಕಾರ್ಯಕ್ರಮ ಆ.15ರಂದು ಸುಳ್ಯದ ವೆಂಕಟ್ರಮಣ ದೇವ ಮಂದಿರದ ಶ್ರೀನಿವಾಸ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತ್ಯ ಸಂಗೀತ ಕಲಾಕೇಂದ್ರದ ನಿರ್ದೇಶಕಿ ಆರತಿ ಪುರುಷೋತ್ತಮ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆಹರು ಮೆಮೋರಿಯಲ್ ಕಾಲೇಜಿನ...

ಲೇಖನ : ಭಯವು ನಮ್ಮೊಳಗಿನ ಆತ್ಮವಿಶ್ವಾಸವನ್ನು ಕಸಿದುಕೊಳ್ಳುತ್ತದೆ…

ನಮ್ಮಲ್ಲಿ ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕು ಅನ್ನುವ ಕನಸಿರುತ್ತದೆ. ಆದ್ರೆ “ನಮ್ಮ ಸುತ್ತಲಿರುವವರು ಏನನ್ನುತ್ತಾರೋ, ಅವರೇನನ್ನುತ್ತಾರೋ, ಇವರೇನನ್ನುತ್ತಾರೋ” ಎನ್ನುವ ಭಯ ನಮ್ಮನ್ನು ಸದಾ ಕಾಡುತ್ತಿರುತ್ತದೆ. ಆ ಭಯವೇ ನಮ್ಮೊಳಗಿನ ಆತ್ಮವಿಶ್ವಾಸವನ್ನು ಕಸಿದುಕೊಳ್ಳುತ್ತದೆ ಮತ್ತು ಜೀವನದಲ್ಲಿ ನಮ್ಮನ್ನು ಮುಂದೆ ಸಾಗಲು ಬಿಡುವುದಿಲ್ಲ. ಆದ್ದರಿಂದ ನಾವು ಜೀವನದಲ್ಲಿ ಮುಂದೆ ಸಾಗಬೇಕಾದರೆ ಮೊದಲು ಆ ಭಯವನ್ನು ಬಿಡಬೇಕು. ಸಾಧನೆಯ...

ಸುಳ್ಯ : ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಆಗಸ್ಟ್ 15 ರಂದು ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಸಂಸ್ಥೆಯ ಸಂಚಾಲಕರಾದ ರೆ. ಫಾ.ವಿಕ್ಟರ್ ಡಿ'ಸೋಜಾ ಧ್ವಜಾರೋಹಣ ನೆರವೇರಿಸಿ,  ಸಭಾಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಸ್ವಯಂ ಶಿಸ್ತು, ಪರಸ್ಪರ  ಗೌರವಿಸುವುದು, ದೇಶಾಭಿಮಾನವನ್ನು ಜೀವನದಲ್ಲಿ ರೂಡಿಸಿಕೊಳ್ಳುವುದು ,ಹಾಗೂ ಸಂವಿಧಾನದ ಮಹತ್ವದ  ಬಗ್ಗೆ  ಸಂದೇಶ ನೀಡಿದರು.ನಿವೃತ್ತ ಯೋಧರಾದ ಚಾರ್ಲ್ಸ್ ಹೆರಾಲ್ಡ್ ಡಿ'ಸೋಜಾ ಇವರು ವಿದ್ಯಾರ್ಥಿಗಳಿಂದ...

ಸುಬ್ರಹ್ಮಣ್ಯ : ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ರಾಮಚಂದ್ರ ಪಳಂಗಾಯ ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು. ರಾಮಚಂದ್ರ ಪಳಂಗಾಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಖ್ಯೋಪಾಧ್ಯಾಯರಾದ ಮಾಧವ ಅವರು ಉಪಸ್ಥಿತರಿದ್ದರು. ಮುಖ್ಯ ಭಾಷಣಕಾರರಾಗಿ ಶಿವಕುಮಾರ್ ಹೊಸೋಳಿಕೆ ಉಪಸ್ಥಿತರಿದ್ದರು....
Loading posts...

All posts loaded

No more posts

error: Content is protected !!