ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ
ಸ್ವಾತಂತ್ರ್ಯ ದಿನಾಚರಣೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಸುಬ್ರಹ್ಮಣ್ಯದ ಕಾಶಿ ಕಟ್ಟೆಯಿಂದ ಮೆರವಣಿಗೆಯ ಮೂಲಕ ಅತಿಥಿಗಳನ್ನ ಕರೆತಂದು ನಂತರ ಶಾಲಾ ಮೈದಾನದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಧ್ವಜಾರೋಹನವನ್ನು ನಿವೃತ್ತ ಯೋಧ ದಿನೇಶ್ ಸಿಡಿ ನೆರವೇರಿಸಿ, ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಉಪಾಧ್ಯಕ್ಷ ಎಚ್ ಎಲ್ ವೆಂಕಟೇಶ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಶ್ವಿನಿ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಅಧ್ಯಕ್ಷರು...

ಕುಕ್ಕುಜಡ್ಕ : ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಚೊಕ್ಕಾಡಿ ಪ್ರೌಢಶಾಲೆ – ಪೂರ್ವಭಾವಿ ಸಭೆ, ಸಮಿತಿ ರಚನೆ

ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆಗೆ 50 ವರ್ಷ ತುಂಬಿ ಸುವರ್ಣ ಮಹೋತ್ಸವ ಸಂಭ್ರಮವನ್ನು ಆಚರಿಸುವ ಸಲುವಾಗಿ ಆ.15 ರಂದು ಪೂರ್ವಭಾವಿ ಸಭೆ ನಡೆಯಿತು. ಆಡಳಿತ ಮಂಡಳಿ ಅಧ್ಯಕ್ಷರೂ, ಮಾಜಿ ಸಚಿವರೂ ಆದ ಎಸ್. ಅಂಗಾರ ಅವರು ಅಧ್ಯಕ್ಷತೆಯನ್ನು ವಹಿಸಿ ಊರ ಹಿರಿಯರು ಕಟ್ಟಿದ ಶಾಲೆಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ನಮಗಿದೆ. 50 ವರ್ಷ ತುಂಬಿದ ಸಂಭ್ರಮವನ್ನು ಎಲ್ಲರೂ...
Ad Widget

ಕುಕ್ಕುಜಡ್ಕ : ಚೊಕ್ಕಾಡಿ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುಕ್ಕುಜಡ್ಕದ ಚೊಕ್ಕಾಡಿ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ಖಜಾಂಜಿ ಹರ್ಷವರ್ಧನ ಬೊಳ್ಳೂರು, ನಿರ್ದೇಶಕರಾದ ಆನಂದ ಚಿಲ್ಪಾರು, ಸತ್ಯಪ್ರಸಾದ ಪಿಲಿಕಜೆ, ಚೊಕ್ಕಾಡಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಚೈತ್ರಾ ಯು. ಹಾಗೂ ಶಿಕ್ಷಕ ಮತ್ತು ಸಿಬ್ಬಂದಿ...

ಸುಬ್ರಹ್ಮಣ್ಯ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು.  ನಂತರ ಸರಕಾರದ ನಿಯಮ ಪ್ರಕಾರ ಅಮೃತ ಸರೋವರದ ಬಳಿ ದ್ವಜಾರೋಹಣ ನಡೆಸಲಾಯಿತು. ಈ ಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ಯೋಧ ಭವಾನಿಶಂಕರ ಪೂಂಬಾಡಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿ ಪಂಚಾಯತ್ ಸದಸ್ಯರು...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಬಹು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣಗೈದರು. ಬಳಿಕ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಮುಂದೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರು ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಪುಟಾಣಿಗಳು ಭಾಷಣ, ಯೋಧರ...

ಸುಬ್ರಹ್ಮಣ್ಯ ಅಂಗನವಾಡಿಯಲ್ಲಿ ಸ್ವಾತಂತ್ರ್ಯೋತ್ಸವ

ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ವಾಣಿ ವಾಣಿತ ಸಮಾಜ (ರೀ )ಇವರ ಜಂಟಿ ಸಹಯೋಗದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾರ್ಪೊರೇಟಿವ್ ಬ್ಯಾಂಕ್ ನಿರ್ದೇಶಕಿ ಶ್ರೀಮತಿ ಶೋಭಾ ನಲ್ಲೂರಾಯ ನೆರವೇರಿಸಿದರು .ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಶಾಲಾಕ್ಷಿ ಸಹಕರಿಸಿದರು .ಈ ಸಂದರ್ಭದಲ್ಲಿ ವಾಣಿ ವನಿತಾ ಸಮಾಜ ರಿಜಿಸ್ಟರ್ಡ್ ಅಧ್ಯಕ್ಷ ಶ್ರೀಮತಿ ಹೇಮಾವತಿ,...

ಕಡಬ : ಡಾ. ರವಿ ಕಕ್ಕೆಪದವು ಅವರಿಗೆ ಸನ್ಮಾನ

ಸುಬ್ರಹ್ಮಣ್ಯದ ಸಮಾಜ ಸೇವಕ ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆ ಪದವು ಅವರಿಗೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಅವರ ವಿಶೇಷ ಸಾಧನೆಗಾಗಿ ಕಡಬ ತಾಲೂಕು ವತಿಯಿಂದ ಗುರುತಿಸಿ ಇಂದು ಕಡಬ ಆಡಳಿತ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ತಹಶೀಲ್ದಾರ್ ಲೋಕೇಶ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಸಹಾಯಕ...

ಕೆ.ವಿ.ಜಿ. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯೋತ್ಸವ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್ ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀಮತಿ...

ಸುಳ್ಯದ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಬಳಿ ಸ್ವಾತಂತ್ರ್ಯೋತ್ಸವ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ (ರಿ.) ಮಂಗಳೂರು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ (ರಿ.) ಮಂಗಳೂರು ಮತ್ತು ಯುವ ಘಟಕ ಹಾಗೂ ಮಹಿಳಾ ಘಟಕ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ತುಳುನಾಡಿನ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಸಂಭ್ರಮಿಸಲಾಯಿತು.ಈ...

ಪರಿವಾರಕಾನ : ಸ್ವಾತಂತ್ರ್ಯೋತ್ಸವ ಆಚರಣೆ

ಪರಿವಾರಕನ ಅಂಗನವಾಡಿ ಕೇಂದ್ರ ದಲ್ಲಿ 76ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಪಂಚಾಯತ್ ಸದಸ್ಯರಾದ ರತೀಶನ್ ಅರಂಬೂರು ಧ್ವಜಾರೋಹಣ ಮಾಡಿದರು. ಗಣೇಶ್ ಇಂಡಸ್ಟ್ರೀಸ್ ಮಾಲಕ ಜಗದೀಶ್ ಸರಳಿಕುಂಜ, ಪದ್ಮನಾಭ ನಾಯರ್, ಬಾಪು ಸಾಹೇಬ್, ಭಾಸ್ಕರ್ ನಾಯರ್ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು, ಪುಟಾಣಿ ಮಕ್ಕಳು ಧರ್ಮಸ್ಥಳ ಗ್ರಾಮಭಿವೃದ್ಧಿ ಒಕ್ಕೂಟದ ಅಧ್ಯಕ್ಷರು, ಸೇವಾಪ್ರತಿನಿಧಿ, ಪೂಮಲೆ ಕ್ರೀಡಾ ಕಲಾ ಸಂಘದ...
Loading posts...

All posts loaded

No more posts

error: Content is protected !!