- Sunday
- August 2nd, 2026
ರೈಲ್ವೆ ಇಲಾಖೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೇ ಸಚಿವ Ashwini Vaishnaw ಅವರಿಗೆ ಮನವಿ ಸಲ್ಲಿಸಿದರು ಅದರಲ್ಲಿ ಮುಖ್ಯವಾಗಿ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಾಣ ಬೆಂಗಳೂರು – ಮಂಗಳೂರು ರೈಲ್ವೆ ಲೈನ್ ಮೇಲ್ದರ್ಜೆಗೆ ಮತ್ತು ವಿದ್ಯುದೀಕರಣ. ಮಂಗಳೂರಿನಿಂದ ವಾರಣಾಸಿ,...
ಕಳಂಜದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ.ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ. 2022 ಜು.19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 8...
ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ಎಂಬಲ್ಲಿನ ಅಬ್ದುಲ್ ನವಾಝ್ ಎಂಬ ಯುವಕ ಮೂರು ವರ್ಷಗಳ ಹಿಂದೆ ರಿಹಾ ಫಾತಿಮ ಎಂಬುವವರನ್ನು ಮದುವೆಯಾಗಿದ್ದರು. ಇತ್ತೀಚೆಗೆ ದಾಂಪತ್ಯದಲ್ಲಿ ವೈಮನಸ್ಸು ಉಂಟಾಗಿ ಪತಿ ತನಗೆ ಕಿರುಕುಳ ನೀಡುತ್ತಿದ್ದು,ಇದೀಗ ಕೊಲೆಗೆ ಯತ್ನಿಸಿದ್ದಾರೆಂದು ಗಂಡನ ವಿರುದ್ಧ ಮಹಿಳೆ ಪೋಲೀಸರಿಗೆ ದೂರು ನೀಡಿದ ಘಟನೆ ಆ.2 ರಂದು ವರದಿಯಾಗಿದೆ. ಮಹಿಳೆ ನೀಡಿದ ದೂರಿನಲ್ಲಿ ವರದಕ್ಷಿಣೆ...
ಕರ್ನಾಟಕ ರಾಜ್ಯ ಭಾವೈಕ್ಯತೆ ಪರಿಷತ್ ದಕ್ಷಿಣ ಕನ್ನಡ ಆಯೋಜಿಸಿದ್ದ ರಾಜ್ಯಮಟ್ಟದ ಭಾವೈಕ್ಯತಾ ಕವಿ ಸಮ್ಮಿಲನ ಮತ್ತು ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಸಾಹಿತಿ , ಜ್ಯೋತಿಷಿ , ಸಂಘಟಕ ಮತ್ತು ಚಿತ್ರ ನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ಅವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿಯನ್ನು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಕ್ಬಾಲ್ ಬಾಳಿಲ ಅವರು ಪ್ರದಾನ ಮಾಡಿದರು . ಸಮಾರಂಭದ...
ಆಚಾರ್ಯ ಯೋಗ ಯೂತ್ ಕ್ಲಬ್(ರಿ.) ಬೆಂಗಳೂರು ಇವರು ಜು.30 ರಂದು ಬೆಂಗಳೂರಿನ ಶ್ರೀ ರಾಜೇಶ್ವರಿ ವಿದ್ಯಾ ಶಾಲಾ ಕೆಂಚೇನಹಳ್ಳಿ ಇಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್-2023 ರಲ್ಲಿ ನಿರಂತರ ಯೋಗ ಕೇಂದ್ರ ಏನೇಕಲ್ಲಿನ ವಿದ್ಯಾರ್ಥಿಗಳಾದ 8 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಶ್ವಿಕ.ಕೆ 5ನೇ ಸ್ಥಾನ, ಅಕ್ಷಯ.ಬಿ.ಎಮ್ 10ನೇ ಸ್ಥಾನ, ಅಶ್ವಿಕ.ಕೆ,...
✍️ಉಲ್ಲಾಸ್ ಕಜ್ಜೋಡಿ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಹಾನಿಗಳು ಸಂಭವಿಸಿದಾಗ, ಮೂರ್ನಾಲ್ಕು ಗ್ರಾಮಗಳು ಆ ಜಲಪ್ರಳಯಕ್ಕೆ ಸಿಲುಕಿ ಅಪಾರ ಹಾನಿ ಸಂಭವಿಸಿದರೆ ಎಷ್ಟೇ ವರ್ಷಗಳು ಕಳೆದರೂ ಆ ಕರಾಳ ನೆನಪುಗಳು ಜನರ ಮನಸ್ಸಿನಿಂದ ಎಂದಿಗೂ ಮರೆಯಾಗುವುದಿಲ್ಲ.ಕಳೆದ ಒಂದು ವರ್ಷದ ಹಿಂದೆ ಅಂದರೆ 2022ರ ಆಗಸ್ಟ್ ನಲ್ಲಿ ಸುರಿದ ಭಾರೀ ಮಳೆಗೆ ಹರಿಹರ ಪಲ್ಲತ್ತಡ್ಕ ಹಾಗೂ ಕೊಲ್ಲಮೊಗ್ರು ಗ್ರಾಮ...
ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಕಾರ್ಯಕ್ರಮವನ್ನು 2023ರ ಮುಂಗಾರು ಹಂಗಾಮಿಗೆ ಅನ್ವಯಿಸಿ ವಿಮೆ ಪಾವತಿಸಲು ಆಗಸ್ಟ್ 7 ರ ವರೆಗೆ ಅವಕಾಶ ನೀಡಲಾಗಿದೆ ಎಂದು ಸುಳ್ಯ ತೋಟಗಾರಿಕಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಯೋಜನೆಯು ಕೇಂದ್ರ ಸರಕಾರ ನೀಡಿರುವ ಮಾನದಂಡಗಳ ಆಧಾರದಲ್ಲಿ ಅಧಿಸೂಚಿತ ತೋಟಗಾರಿಕೆ ಬೆಳೆಗಳನ್ನು ಬೆಳೆದ ರೈತರಿಗೆ...
ಮಳೆ ಕಾರಣ ನೀಡಲಾಗಿದ್ದ ರಜೆ ಸರಿದೂಗಿಸಲು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶನಿವಾರ ಪೂರ್ತಿ ದಿನ ಶಾಲೆ ನಡೆಸುವ ಕುರಿತು ಹೊರಡಿಸಿರುವ ಆದೇಶ ಹಿಂಪಡೆಯಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಈ.ರಮೇಶ್ ತಿಳಿಸಿದ್ದಾರೆ. ಮಳೆಯ ಸಂದರ್ಭದಲ್ಲಿ ಜಿಲ್ಲಾ ಹಂತದಿಂದ ರಜೆ ನೀಡಿರುವುದರಿಂದ ಹಾಗೂ ಮುಂದಿನ ದಿನಗಳಲ್ಲಿ ಮಳೆಯಾಗುವ ಸಂದರ್ಭಗಳು ಇರುವುದರಿಂದ ಮಳೆ ಸಂದರ್ಭದಲ್ಲಿ ನೀಡಿರುವ ರಜೆಯನ್ನು ತರಗತಿ ನಡೆಸಿ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ತಾಯಿ, ಮಗ ಕಾಣೆ ಕಾಣೆಯಾದ ಘಟನೆ ಜು.31 ವರದಿಯಾಗಿದ್ದು ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಗಂಡ ದೂರು ನೀಡಿದ ಘಟನೆ ವರದಿಯಾಗಿದೆ. ಸುಬ್ರಹ್ಮಣ್ಯ ಠಾಣೆಗೆ ಆ.1 ರಂದು ದೂರು ನೀಡಿರುವ ಬೆಂಗಳೂರು ಗ್ರಾಮಾಂತರದ ರಾಜಶೇಖರ್ ಅವರು ನನ್ನ ಪತ್ನಿ 28 ಪ್ರಾಯದ ಹರ್ಷಿತ ಮತ್ತು ಮೂರು ವರ್ಷ ಪ್ರಾಯದ ಭರತ್...
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.6 ರಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಚಾಲನೆ ನೀಡಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ....
Loading posts...
All posts loaded
No more posts
